Posted by: sundaranadu on: December 31, 2009
Posted by: sundaranadu on: December 14, 2009
Posted by: sundaranadu on: December 10, 2009
ರೈತ ಆಕಾಶಕೆ ಕೈ ಮುಗಿದಾಯಿತು
ತಲೆ ಮೇಲೆ ಕೈ ಹೊತ್ತು ಕೂರಬೇಕಾಯಿತು
ಊರದೇವರ ಜಾತ್ರೆಯಾಯಿತು
ಕಪ್ಪೆಗಳ ಮದುವೆಯಾಯಿತು
ಇಲ್ಲ ಇಲ್ಲ
ಒಂದೇ ಒಂದು ಹನಿ ಮಳೆಯಾಗಲಿಲ್ಲ
ಎಲ್ಲೆಡೆ ನಿಟ್ಟುಸಿರು
ಸಾಲದ ಕರಿನೆರಳು
ಸಾವಿಗೆ ಶರಣಾಯಿತು ಜೀವ
ಬಿರಿದ ಹೊಲದಲ್ಲಿ ವಿಷ ಕುಡಿದ ದೇಹ
ಒಣಗಿದ ಮರದಲ್ಲೂ ನೇತಾಡಿತು ಜೀವ
ಕಣ್ಣೀರೊಂದೇ ಕಾಣಬೇಕಾಯಿತು
ಅದೊಂದು ಮಳೆ
ಎಲ್ಲಿ ಅಡಗಿತ್ತೋ
ಭುವಿ-ಬಾನು ಒಂದಾಗುವಂತೆ ಗುಡುಗಿತು
ಅಬ್ಬಾ! ಅದೇನು ಮಳೆಯೋ?
ನೆಲ-ಜನ-ಪ್ರಾಣಗಳೆಲ್ಲ ಅಯೋಮಯ
ನೀರು-ನೀರೆಂದು ಹಾತೊರೆದವರ
ಮನೆಯೇನು, ಪ್ರಾಣವು ನಡುಗಿತು
ನೊಂದ ಮನದ ಆಕ್ರಂದನಕೆ
ಹಲವು ಹೃದಯಗಳು ಮಣಿದವು
ತುಂಬಿದ ಹೊಳೆಯಂತೆ ಹರಿದಿತು
ನೆರವಿನ ಮಹಾಪೂರ
ನವಗ್ರಾಮಗಳ ನಿರ್ಮಾಣಕೆ
ಬುನಾದಿ ಹಾಕಿದರು ಹಲವರು
ಇಚ್ಚಾಶಕ್ತಿ ಮೆರೆಯಲಿ ಮೇಲಾಗಿ
ದುಡಿಯಲಿ ಎಲ್ಲ ಸಕ್ರಿಯವಾಗಿ
ನೊಂದವರ ಕಣ್ಣೀರು ಒರೆಸಲಿ
ರಾಜ್ಯವಾಳುವ ಕೈಗಳು
ನಲುಗಿದವರು ಮತ್ತೊಮ್ಮೆ ನಸುನಗಲಿ
ಹಸಿದವರ ಬದುಕು ಹಸನಾಗಲಿ
Posted by: sundaranadu on: December 2, 2009
Posted by: sundaranadu on: November 12, 2009
ಹೆದರಿಕೆ ಶುರುವಾಗಿದೆ
ಯಾಕೋ ಅಮಾವಾಸ್ಯೆಗೆ
ತನ್ನೊಡಲ ಕಗ್ಗತ್ತಲಿನಲೂ
ಸಾಗುವ ಖದೀಮರ ನಿರ್ಭೀತ ನಡೆಗೆ
ಹಣವು ಅಳುತಲಿದೆ
ಹೆಣವು ಅಂಜಿದೆ
ಹಣಕಾಗಿ ಹೆಣವನ್ನು ಕದ್ದೊಯ್ಯುವ
ಲೋಭಿಗಳ ಹಾಳು ನಡೆಗೆ
ಭೂಮಿಯು ನಡುಗುತಿದೆ
ಕಾಡೆಲ್ಲೋ ಮರೆಯಾಗುತಿದೆ
ಕಾಸಿಗಾಗಿ ಮಣ್ಣನು ಬಿಡದ
ಮಾನವನ ಅತಿಆಸೆಯ ನಡೆಗೆ
ನೀರೆಲ್ಲ ನಾಪತ್ತೆ
ಉಸಿರೆಲ್ಲ ವಿಷವಂತೆ
ನೀರಲ್ಲೂ, ಉಸಿರಲ್ಲೂ ವಿಷವ ಹರಡೋ
ದಾನವ ರೂಪಿಯ ನಡೆಗೆ
ನಡುಗುತಿದೆ ಇವನ ನಡೆಗೆ
ಭುವಿ-ಬಾನೆಲ್ಲ
ಮೂಕವಾಗಿಯ ನೋಡುತಿದೆ
ಕಾಯುತ ಕಾಲ
Posted by: sundaranadu on: November 6, 2009
Posted by: sundaranadu on: October 26, 2009
ನಿನ್ನೊಡನೆ
ಮಾತಾಡಲು
ಗುದ್ದಾಡಲು
ಮುದ್ದಾಡಲು
ಬಯಸುತಿದೆ ಮನಸು
ತೋರದಿರು ಮುನಿಸು
ಮರದಂತೆ ನೀನು
ಪಾದದಡಿಯ ಬಳ್ಳಿ ನಾನು
ನಿನ್ನ ನೋಡುತಲೇ
ಹಬ್ಬುವೆನು
ನಿನ್ನ ತೋಳ್ತೆಕ್ಕೆಯಲಿ
ಉಬ್ಬುವೆನು
ನನ್ನ ಉಸಿರಿಂದು
ನಿನ್ನ ಕೈಯಲ್ಲಿ
ನೀನಿಲ್ಲದಿರೆ
ನಾನೆಲ್ಲಿ
Posted by: sundaranadu on: October 9, 2009
ಹೇ ಸಖಿ
ನೋಡುತಲಿದ್ದೆ
ಅನುದಿನವೂ, ಅನುಕ್ಷಣವೂ
ಅನುರಾಗವು
ಎಂದೋ ಮೊಳೆದಿತ್ತು
ನನ್ನ ಕಣ್ಣೋಟವೂ
ನಿನಗೂ ತಿಳಿದಿತ್ತು
ಮುಷ್ಟಿ ಗಾತ್ರದ ಹೃದಯದ
ತುಂಬೆಲ್ಲ ನೀನಿದ್ದೆ
ಅದಾಗಿತ್ತು
ನಿನ್ನದೆ ಅರಮನೆ
ನನ್ನದೇ ಪ್ರೀತಿಯ
ತಂಗಾಳಿ ಬೀಸುತಲಿದ್ದೆ
ನಿನ್ನಯ ಮನ ತಣಿಯಲು
ಕಾಣದ ಕೈಯೊಂದು
ಕಾಡುತಲಿತ್ತು
ನಮ್ಮಯ ಅನುದಿನದ ಪ್ರೀತಿಯ
ನನ್ನ ಪ್ರೀತಿಯ ತಂಗಾಳಿಗೆ
ವಿಷ ಉಣಿಸಿ
ಪ್ರೀತಿಯರಮನೆಯ ಬರಿದು ಮಾಡಿತು
ಬದುಕು ಮಸಣವಾಯಿತು ಇಂದು
Posted by: sundaranadu on: October 9, 2009
ಕತ್ತಲೆಯೊಳು ಮುಳುಗುತಿಹುದು
ಈ ಜಗವ ಬೆಳಗಿದ ಸೂರ್ಯ
ಬೆಳದಿಂಗಳ ಹುಣ್ಣಿಮೆಯೂ
ಇನ್ನಿಲ್ಲ
ಅಮಾವಾಸ್ಯೆ, ಎಲ್ಲೆಲ್ಲೂ ಆವರಿಸಿದೆ
ಬರ-ನೋವು-ಸಾವಿನ
ಕರಿನೆರಳಿನ ಅಟ್ಟಹಾಸ
ಎಲ್ಲರೆದೆಯಲ್ಲು ಪ್ರೀತಿ, ಜ್ಞಾನ
ಕರುಣೆ ತುಂಬುವವರೆಗೂ
ಕಳೆಯದು ಈ ಇರುಳು
Posted by: sundaranadu on: August 16, 2009
ಕೆನ್ನೈದಿಲೆಯ ಹುಡಿ ಮಾಡಿ
ಚಂದ್ರನ ಬೆಳದಿಂಗಳ ಹಾಲ ಮಾಡಿ
ಕಲಸಿ ಮಾಡಿದ ಮೊಗ
ಕಡು ಅನ್ಧಕಾರದಲು
ಮಿನುಗುವುದು ಜಗ-ಮಘ
ಜಿಂಕೆಗಳ ಕೊಂದು
ಕಣ್ಣಿಟ್ಟನೊ ಬ್ರಹ್ಮ
ಈ ಸೌಂದರ್ಯಕೆ
ಅಲ್ಲಲ್ಲಿ ಸುಳಿಯುವ
ಹೂವ ಮುಂಗುರುಳು
ಹಂಸಗಳ ವಧೆ ಮಾಡಿ
ರೆಕ್ಕೆಗಳ ಕೊಯ್ದು ತಂದು
ಮಾಡಿದನೆ ಬ್ರಹ್ಮ
ಚೆಲುವೆಯ ಕಣ್ರೆಪ್ಪೆಗಳ
ಹೂವ ಮಕರಂಧವನೆಲ್ಲ
ಕೂಡಿಸಿ
ಹಾಲ ನೊರೆಯಿಂದ ಮುಳುಗಿಸಿ
ಹೆಣೆಯಿತೇ ಬೊಮ್ಮನ ಕೈಗಳು
ಸವಿಯ ಚೆನ್ದುಟಿಯ
ಹಾಲ ಕೊಳದಿ ಬೆಳೆದ
ಕೆಂಪು ಕಮಲವ ಆಯ್ದು ತಂದು
ಜೇನು ಗಂಧಗಳ ಬೆರೆಸಿ
ಅರೆದು ಮಾಡಿದನೆ
ಸೌಗಂಧದ ಚೆಲುವ ಮೈ ಸಿರಿಯ
ಈ ಚೆಲುವೆ
ಕೈ ಯಾಡುವೆಡೆ
ಬಿರುಗಾಳಿ ತಂಗಾಳಿ ಯಾಗುವುದು
ಇವಳು ನಡೆದಾಡು ವೆಡೆ
ಮರುಭೂಮಿ ಹಸಿರು ಕಾನನವಾಗುವುದು
ನಿನ್ನ ಸೌಂದರ್ಯಕೆ
ಪದಗಳೇ ನಿಲುಕವು
ಹಾಡಿ ಹೊಗಳಲೆಂದರೆ
ನಿನ್ನ ನೋಡುತಲೇ
ಎಲ್ಲ ಮರೆವವು
ಹೇಳೆ ಚೆಲುವೆ
ನಿನ್ನ ವರ್ಣಿಸೋ ರಸಿಕನಾರು?
ನಿನ್ನ ಸೌಂದರ್ಯಕೆ
ಸಿಲುಕುವ ಪದಗಳಾವು
ಅಭಿಪ್ರಾಯಗಳು