Posted by: sundaranadu on: November 12, 2009
ಹೆದರಿಕೆ ಶುರುವಾಗಿದೆ
ಯಾಕೋ ಅಮಾವಾಸ್ಯೆಗೆ
ತನ್ನೊಡಲ ಕಗ್ಗತ್ತಲಿನಲೂ
ಸಾಗುವ ಖದೀಮರ ನಿರ್ಭೀತ ನಡೆಗೆ
ಹಣವು ಅಳುತಲಿದೆ
ಹೆಣವು ಅಂಜಿದೆ
ಹಣಕಾಗಿ ಹೆಣವನ್ನು ಕದ್ದೊಯ್ಯುವ
ಲೋಭಿಗಳ ಹಾಳು ನಡೆಗೆ
ಭೂಮಿಯು ನಡುಗುತಿದೆ
ಕಾಡೆಲ್ಲೋ ಮರೆಯಾಗುತಿದೆ
ಕಾಸಿಗಾಗಿ ಮಣ್ಣನು ಬಿಡದ
ಮಾನವನ ಅತಿಆಸೆಯ ನಡೆಗೆ
ನೀರೆಲ್ಲ ನಾಪತ್ತೆ
ಉಸಿರೆಲ್ಲ ವಿಷವಂತೆ
ನೀರಲ್ಲೂ, ಉಸಿರಲ್ಲೂ ವಿಷವ ಹರಡೋ
ದಾನವ ರೂಪಿಯ ನಡೆಗೆ
ನಡುಗುತಿದೆ ಇವನ ನಡೆಗೆ
ಭುವಿ-ಬಾನೆಲ್ಲ
ಮೂಕವಾಗಿಯ ನೋಡುತಿದೆ
ಕಾಯುತ ಕಾಲ
ಅಭಿಪ್ರಾಯಗಳು