ಅಭಿಮಾನಿ

ನಡುಗುತಿದೆ ಇವನ ನಡೆಗೆ

Posted by: sundaranadu on: November 12, 2009

ಹೆದರಿಕೆ ಶುರುವಾಗಿದೆ
ಯಾಕೋ ಅಮಾವಾಸ್ಯೆಗೆ
ತನ್ನೊಡಲ ಕಗ್ಗತ್ತಲಿನಲೂ
ಸಾಗುವ ಖದೀಮರ ನಿರ್ಭೀತ ನಡೆಗೆ

ಹಣವು ಅಳುತಲಿದೆ
ಹೆಣವು ಅಂಜಿದೆ
ಹಣಕಾಗಿ ಹೆಣವನ್ನು ಕದ್ದೊಯ್ಯುವ
ಲೋಭಿಗಳ ಹಾಳು ನಡೆಗೆ

ಭೂಮಿಯು ನಡುಗುತಿದೆ
ಕಾಡೆಲ್ಲೋ ಮರೆಯಾಗುತಿದೆ
ಕಾಸಿಗಾಗಿ ಮಣ್ಣನು ಬಿಡದ
ಮಾನವನ ಅತಿಆಸೆಯ ನಡೆಗೆ

ನೀರೆಲ್ಲ ನಾಪತ್ತೆ
ಉಸಿರೆಲ್ಲ ವಿಷವಂತೆ
ನೀರಲ್ಲೂ, ಉಸಿರಲ್ಲೂ ವಿಷವ ಹರಡೋ
ದಾನವ ರೂಪಿಯ ನಡೆಗೆ

ನಡುಗುತಿದೆ ಇವನ ನಡೆಗೆ
ಭುವಿ-ಬಾನೆಲ್ಲ
ಮೂಕವಾಗಿಯ ನೋಡುತಿದೆ
ಕಾಯುತ ಕಾಲ

Leave a Reply

All articles, poems and writings are written by myself (Sundaranadu) except Kannada SMS and Proverbs. ಇಲ್ಲಿ ಬರೆದಿರುವ ಎಲ್ಲ ಲೇಖನಗಳು, ಕವಿತೆಗಳು, ಬರಹಗಳು (ಕನ್ನಡ ಗಾದೆಗಳು ಮತ್ತು ಏಸ್ಸೆಮ್ಮೆಸ್ಸು ಹೊರತುಪಡಿಸಿ) ನನ್ನ (ಸುಂದರನಾಡು) ಸ್ವಂತದ್ದಾಗಿವೆ. ಸುಂದರನಾಡಿಗೆ ಬಂದು ಹೋದವರು Locations of visitors to this page

ಸುಂದರನಾಡಿನ ಅತಿಥಿಗಳು

  • 15,102